
ಲಕ್ನೋ, 16 ಮಾರ್ಚ್ (ಹಿ.ಸ.):
ಆ್ಯಂಕರ್:
ಆರ್ಎಸ್ಎಸ್ ಸರ್ಕಾರಿವಾಹ ದತ್ತಾತ್ರೇಯ ಹೊಸಬಾಳೆ ಅವರು ಚೈತ್ರ ನವರಾತ್ರಿ ಅಂಗವಾಗಿ ಮಾರ್ಚ್ 18ರಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 19ರಂದು ಅಯೋಧ್ಯೆ ರಾಮ ಮಂದಿರದಲ್ಲಿ ನಡೆಯಲಿರುವ ವರ್ಷ ಪ್ರತಿಪದ ಮಹೋತ್ಸವದಲ್ಲಿ ಅವರು ಭಾಗವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ದೇವಾಲಯದ ಎರಡನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀ ರಾಮ ಯಂತ್ರವನ್ನು ಪ್ರತಿಷ್ಠಾಪಿಸಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ವಹಣಾ ಅಧಿಕಾರಿ ಗೋಪಾಲ್ ತಿಳಿಸಿದ್ದಾರೆ.
ಇದು ಸಂಘದ ಪ್ರತಿನಿಧಿ ಸಭೆ 2026 ಬಳಿಕ ಉತ್ತರ ಪ್ರದೇಶಕ್ಕೆ ದತ್ತಾತ್ರೇಯ ಹೊಸಬಾಳೆ ಅವರ ಮೊದಲ ಭೇಟಿ ಆಗಿದೆ. ಇದರ ಮೊದಲು ಸಂಘದ ಸರ್ಸಂಘಚಾಲಕ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು.
ವರ್ಷ ಪ್ರತಿಪದ ಮಹೋತ್ಸವದ ಅಂಗವಾಗಿ ಸುಮಾರು ಏಳು ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರು ಅಯೋಧ್ಯೆಗೆ ಆಗಮಿಸುವಂತೆ ಮನವಿ ಮಾಡಲಾಗಿದ್ದು, ವಾಸ್ತವ್ಯ ಮತ್ತು ಆಹಾರದ ವ್ಯವಸ್ಥೆಯನ್ನು ಟ್ರಸ್ಟ್ ವತಿಯಿಂದ ಮಾಡಲಾಗಿದೆ.
ಮಾರ್ಚ್ 19ರಿಂದಲೇ ಚೈತ್ರ ನವರಾತ್ರಿ ಆರಂಭವಾಗುವುದರಿಂದ ಉಪವಾಸ ಮಾಡುವ ಭಕ್ತರಿಗಾಗಿ ಹಣ್ಣು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಕಾರ್ಯಕ್ರಮದ ನಂತರ ಅತಿಥಿಗಳಿಗೆ ರಾಮಲಲ್ಲಾ ದರ್ಶನದ ವ್ಯವಸ್ಥೆಯೂ ಇರಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa