ಅಂಬೇಡ್ಕರ್ ಹಬ್ಬ 2026: ‘ಮಹಾನಾಯಕ ಕಪ್’ ಕ್ರಿಕೆಟ್ ಸ್ಪರ್ಧೆಗೆ ಚಾಲನೆ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಅಂಬೇಡ್ಕರ್ ಹಬ್ಬ–2026 ಅಂಗವಾಗಿ ವಿದ್ಯಾರ್ಥಿ ಯುವ ಜನರಿಗಾಗಿ ಎರಡನೇ ವರ್ಷದ ‘ಮಹಾನಾಯಕ ಕಪ್’ ಕ್ರಿಕೆಟ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ದಲಿತ ಸಂಘಟನೆಯ ಸಂಘಟಕರು ತಿಳಿಸಿದ್ದಾರೆ. ಏಪ್ರಿಲ್ 11ರಿಂದ 14ರವರೆಗೆ ನಾಲ್
ಹಬ್ಬ


ವಿಜಯಪುರ, 17 ಮಾರ್ಚ್ (ಹಿ.ಸ.)

ಆ್ಯಂಕರ್ : ಅಂಬೇಡ್ಕರ್ ಹಬ್ಬ–2026 ಅಂಗವಾಗಿ ವಿದ್ಯಾರ್ಥಿ ಯುವ ಜನರಿಗಾಗಿ ಎರಡನೇ ವರ್ಷದ ‘ಮಹಾನಾಯಕ ಕಪ್’ ಕ್ರಿಕೆಟ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ದಲಿತ ಸಂಘಟನೆಯ ಸಂಘಟಕರು ತಿಳಿಸಿದ್ದಾರೆ.

ಏಪ್ರಿಲ್ 11ರಿಂದ 14ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಯುವಕರು ಭಾಗವಹಿಸುವ ನಿರೀಕ್ಷೆ ಇದೆ.

ಸಮಾನತೆಯ ಸಂದೇಶ ಸಾರುವ ಈ ಹಬ್ಬದಲ್ಲಿ ಕ್ರೀಡೆ ಸೇರಿದಂತೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಂಬೇಡ್ಕರ್ ಹಬ್ಬವನ್ನು “ನಮ್ಮೆಲ್ಲರ ಹಬ್ಬ”ವಾಗಿ ಆಚರಿಸುವ ಉದ್ದೇಶದಿಂದ ಯುವಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande