
ಹಾವೇರಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ತಡಸ ಗ್ರಾಮದಲ್ಲಿ ಭಾರತ ಸೇವಾ ಸಂಸ್ಥೆ ಏರ್ಪಡಿಸಿದ ಕಂಚಗಾರಗಟ್ಟಿ ಕೆರೆ ಹೂಳೆತ್ತುವ ಕಾಮಗಾರಿಯ ಪ್ರಾರಂಭೋತ್ಸವವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರುಮಡಿದರು .
ಈ ಸಂಧರ್ಭದಲ್ಲಿ ಶ್ರೀ ಷ.ಬ್ರ ವೈಜಿನಾಥ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಚರಮೂರ್ತೇಶ್ವರ ಮಠ, ಗಂಜಿಗಟ್ಟಿ ಶ್ರೀ ಗಳು ಸಾನಿಧ್ಯ ವಹಿಸಿದ್ದರು. ಖ್ಯಾತ ಚಲನಚಿತ್ರ ನಟರಾದ ಅನಿರುದ್ಧ ಜೆ, ಭಾರತ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ದುಂಡಿಗೌಡ್ರ, ಭಾರತೀಯ ಜನತಾ ಪಕ್ಷದ ಶಿಗ್ಗಾಂವ ಮಂಡಳದ ಅಧ್ಯಕ್ಷರಾದ ವಿಶ್ವನಾಥ ಹರವಿ, ಮುಖಂಡರಾದ ಮಹೇಂದ್ರ ಸಿಂಘಿ, ಜಯಣ್ಣ ಅಗಡಿ, ಪ್ರಕಾಶ ದಾಸನೂರ, ಬಿ.ಟಿ ಇನಾಮತಿ, ಶಿವಾನಂದ ಮ್ಯಾಗೇರಿ, ತಿಪ್ಪಣ್ಣ ಸಾತಣ್ಣವರ, ಅರ್ಜುನ ಹಂಚಿನಮನಿ, ವರುಣಗೌಡ ಪಾಟೀಲ್, ಶಿವಾನಂದ ಸೊಬರದ ಸೇರಿದಂತೆ ಹಲವಾರು ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa