
ಭಾಲ್ಕಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ತಳವಾಡ್ ಗ್ರಾಮದಲ್ಲಿ ಇಂದು ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿಯನ್ನು ಸಚಿವ ಈಶ್ವರ ಖಂಡ್ರೆ ಅನಾವರಣಗೊಳಿಸಿದರು.
ಈ ವೇಳೆ ಮಾತನಾಡಿದ ಅವರು, ಸ್ವರಾಜ್ಯದ ಸ್ಥಾಪಕ, ಧೈರ್ಯ ಮತ್ತು ಸ್ವಾಭಿಮಾನದ ಪ್ರತೀಕವಾದ ಶಿವಾಜಿ ಮಹಾರಾಜರ ಆದರ್ಶಗಳು ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿವೆ. ಅವರ ಜೀವನ ನಮ್ಮಲ್ಲಿ ರಾಷ್ಟ್ರಭಕ್ತಿ, ಏಕತೆ ಮತ್ತು ಶೌರ್ಯವನ್ನು ಉತ್ತೇಜಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಔಸೇಕರ್ ಮಹಾರಾಜರು ಆಶೀರ್ವಚನ ನೀಡಿದರು. ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa