ಪಶ್ಚಿಮ ಏಷ್ಯಾ ದಾಳಿಗಳು ಜಗತ್ತಿಗೆ ಅಪಾಯಕಾರಿ: ಭಾರತ ಆತಂಕ
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸೈನಿಕ ಸಂಘರ್ಷ ಮತ್ತು ದಾಳಿಗಳು ಭಾರತಕ್ಕಷ್ಟೇ ಅಲ್ಲ, ಇಡೀ ಜಗತ್ತಿಗೆ ಅಪಾಯಕಾರಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ಮಂಗಳವಾರ ನಡೆದ ಮಹತ್ವದ ಭದ್ರತಾ ಪರಿಶೀಲನಾ ಸಭೆಯಲ್ಲಿ ಅವರು ರಕ್ಷಣಾ
Meeting


ನವದೆಹಲಿ, 24 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸೈನಿಕ ಸಂಘರ್ಷ ಮತ್ತು ದಾಳಿಗಳು ಭಾರತಕ್ಕಷ್ಟೇ ಅಲ್ಲ, ಇಡೀ ಜಗತ್ತಿಗೆ ಅಪಾಯಕಾರಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.

ಮಂಗಳವಾರ ನಡೆದ ಮಹತ್ವದ ಭದ್ರತಾ ಪರಿಶೀಲನಾ ಸಭೆಯಲ್ಲಿ ಅವರು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಹಾಗೂ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಭಾರತದ ರಕ್ಷಣಾ ಸನ್ನದ್ಧತೆ ಮತ್ತು ಜಾಗತಿಕ ಭದ್ರತಾ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಡಿಆರ್‌ಡಿಒ ಅಧ್ಯಕ್ಷ ಡಾ. ಸಮೀರ್ ಕಾಮತ್, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ಪಶ್ಚಿಮ ಏಷ್ಯಾದ ಸಂಘರ್ಷ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ವ್ಯಾಪಾರಕ್ಕೆ ಅಡ್ಡಿ ಉಂಟಾಗಿದೆ. ಇಂಧನ ಸಾಗಣೆ ತೊಂದರೆಗೊಳಗಾದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆ ಹಾಗೂ ಆರ್ಥಿಕ ಸ್ಥಿರತೆ ಮೇಲೆ ಪರಿಣಾಮ ಬೀರುತ್ತಿದೆ.

ಇದರ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯದ ಕುರಿತು ಮಾಹಿತಿ ನೀಡಿದ್ದು, ಪರಿಸ್ಥಿತಿಯನ್ನು “ಚಿಂತಾಜನಕ” ಎಂದು ವಿವರಿಸಿದ್ದಾರೆ. ಈ ಸಂಘರ್ಷವು ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಮಾತ್ರವಲ್ಲ, ಮಾನವೀಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ಅವರು ಹೇಳಿದರು.

ಭಾರತ ತನ್ನ ಕಚ್ಚಾ ತೈಲ ಮತ್ತು ಅನಿಲದ ಬಹುಪಾಲನ್ನು ಇದೇ ಪ್ರದೇಶದಿಂದ ಆಮದು ಮಾಡಿಕೊಳ್ಳುವುದರಿಂದ ಪರಿಸ್ಥಿತಿಯು ದೇಶದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗವಾಗಿರುವ ಈ ಪ್ರದೇಶದಲ್ಲಿ ಉಂಟಾದ ಅಶಾಂತಿ, ಭಾರತದ ವಾಣಿಜ್ಯ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande