
ಬಾಗಲಕೋಟೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಬೇವೂರ ಹಾಗೂ ಹಳ್ಳೂರ ಗ್ರಾಮಗಳಲ್ಲಿ ಮಾಜಿ ಸಚಿವ Bಬಿ. ಶ್ರೀರಾಮುಲು ಅವರು ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.
ಪ್ರಚಾರದ ವೇಳೆ ಗ್ರಾಮಸ್ಥರನ್ನು ಭೇಟಿ ಮಾಡಿದ ಬಿ. ಶ್ರೀರಾಮುಲು ಅವರು ಅಭಿವೃದ್ಧಿ ಮತ್ತು ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ನಾಯಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭುವನೇಶ ಪೂಜಾರ ಸೇರಿದಂತೆ ಸ್ಥಳೀಯ ಮುಖಂಡರು, ಹಿರಿಯರು ಹಾಗೂ ಯುವಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa