ಜಗತ್ತು ಅಸ್ಥಿರ ಹಂತವನ್ನು ಪ್ರವೇಶಿಸಿದೆ:ರಾಹುಲ್ ಗಾಂಧಿ
ನವದೆಹಲಿ, 05 ಮಾರ್ಚ್ (ಹಿ.ಸ.): ಆ್ಯಂಕರ್: ಜಾಗತಿಕ ಅಶಾಂತಿ ಮತ್ತು ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆಯೇ, ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿದೇಶಾಂಗ ಹಾಗೂ ಇಂಧನ ನೀತಿಗಳ ಮೇಲೆ ತೀವ್ರ ಟೀಕೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಭಾ
Rahul gandhi


ನವದೆಹಲಿ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಜಾಗತಿಕ ಅಶಾಂತಿ ಮತ್ತು ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆಯೇ, ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿದೇಶಾಂಗ ಹಾಗೂ ಇಂಧನ ನೀತಿಗಳ ಮೇಲೆ ತೀವ್ರ ಟೀಕೆ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಭಾರತದ ತೈಲ ಭದ್ರತೆ ಅಪಾಯದಲ್ಲಿದೆ ಎಂದು ಎಚ್ಚರಿಸಿದ ಅವರು, ದೇಶದ ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ 40% ಕ್ಕಿಂತ ಹೆಚ್ಚು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತವೆ ಎಂದು ಹೇಳಿದ್ದಾರೆ. ಎಲ್ ಪಿಜಿ ಮತ್ತು ಎಲ್ ಎನ್ ಜಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಈ ಸಮುದ್ರ ಮಾರ್ಗದಲ್ಲಿ ಯಾವುದೇ ಅಡಚಣೆ ಉಂಟಾದರೆ, ಅದರ ನೇರ ಪರಿಣಾಮ ದೇಶದ ಇಂಧನ ಸರಬರಾಜಿನ ಮೇಲೆ ಬೀಳಲಿದೆ,” ಎಂದು ಅವರು ಹೇಳಿದ್ದಾರೆ.

ಇರಾನ್‌ನ ಯುದ್ಧನೌಕೆ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಮುಳುಗಿದ ಘಟನೆ ಉಲ್ಲೇಖಿಸಿದ ಅವರು, “ಸಂಘರ್ಷ ಈಗ ನಮ್ಮ ಹಿತ್ತಲವರೆಗೆ ತಲುಪಿದೆ. ಆದರೂ ಪ್ರಧಾನಿ ಮೌನ ವಹಿಸಿದ್ದಾರೆ,” ಎಂದು ಆಕ್ಷೇಪಿಸಿದ್ದಾರೆ.

ಈ ಸವಾಲಿನ ಕಾಲಘಟ್ಟದಲ್ಲಿ ದೇಶಕ್ಕೆ ಸ್ಥಿರ ಮತ್ತು ದೃಢ ನಾಯಕತ್ವ ಅಗತ್ಯವಿದೆ ಎಂದು ಹೇಳಿದ ಅವರು, “ಇಂತಹ ಸಮಯದಲ್ಲಿ ಚಕ್ರವನ್ನು ಚಲಾಯಿಸಲು ಸ್ಥಿರವಾದ ಕೈ ಬೇಕು. ಆದರೆ ಭಾರತವು ನಮ್ಮ ಕಾರ್ಯತಂತ್ರದ ಸ್ವಾಯತ್ತತೆಯನ್ನು ಬಿಟ್ಟುಕೊಟ್ಟ ರಾಜಿ ಮಾಡಿಕೊಂಡ ಪ್ರಧಾನಿಯನ್ನು ಹೊಂದಿದೆ,” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande