
ಕೋಲಾರ, ೦೭ ಮಾರ್ಚ್ (ಹಿ.ಸ):
ಆ್ಯಂಕರ್ :
ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಿಸಿರುವ ಬ್ಯಾಸ್ಕೆಟ್ ಬಾಲ್ ಸಿಂಥೆಟಿಕ್ ಟ್ಯ್ರಾಕ್ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ೪.೮೦ ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಶನಿವಾರ ಚಾಲನೆ ನೀಡಿದರು
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಅಭಿವೃದ್ದಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲದೆ ಪಕ್ಷ ಬೇದ ಮರೆತು ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದರು.
ಕಾಮಗಾರಿಯನ್ನು ಗುತ್ತಿಗೆ ಪಡೆದಿರುವವರು ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು ಗುಣಮಟ್ಟದಿಂದ ಕೆಲಸಗಳು ನಡೆಸಬೇಕು ಆರು ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಸಿದ್ದ ಪಡಿಸಿ ಉದ್ಘಾಟನೆ ಮಾಡಬೇಕಿದೆ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು
ನಗರದ ಬಸ್ ನಿಲ್ದಾಣದ ಪಕ್ಕದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ನಡೆಸಿದ ನಂತರ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಸಣ್ಣ ಪುಟ್ಟ ಸಮಸ್ಯೆಗಳನ್ನು ಕೆಲವರು ಭಯಭೀತಗೊಂಡು ಆತಂಕಕ್ಕೆ ಒಳಗಾಗಿ ಆಸ್ಪತ್ರೆಗಳ ಕಡೆ ಮುಖ ಮಾಡುತ್ತಾರೆ ಈ ವೆಳೆ ಅವರಿಗೆ ದೈರ್ಯ ತುಂಬಿದಾಗ ಅರ್ಥದಷ್ಟು ಆರೋಗ್ಯ ಸಮಸ್ಯೆ ಗುಣವಾಗುತ್ತದೆ ಎಂದು ಸಲಹೆ ನೀಡಿದರು.
ಕೋಲಾರ ನಗರದಲ್ಲಿ ಬೀದಿಬದಿಯ ಹೂಹಣ್ಣು ಮಾರಾಟ ಮಾಡುವವರಿಗಾಗಿ ತೆರೆದ ಮಾರುಕಟ್ಟೆಯನ್ನು ಗುದ್ದಲಿ ಪೂಜೆ ನಡೆಸಲಾಗಿದೆ ಪ್ರಮಾಣಿಕವಾಗಿ ಯಾರು ರಸ್ತೆ ಬದಿ ಹಣ್ಣು ತರಕಾರಿ ಮಾರಾಟ ಮಾಡಲಾಗುತ್ತಿದೆ ಅಂತವರಿಗೆ ಮಾತ್ರ ತೆರೆದ ಮಾರುಕಟ್ಟೆಯಲ್ಲಿ ಮೊದಲ ಅವಕಾಶ ಕಲ್ಪಿಸಿಬೇಕು ಯಾವುದೇ ಕಾರಣಕ್ಕೂ ಇದರಲ್ಲಿ ರಾಜಕೀಯಕ್ಕೆ ಮಣಿಯದೇ ಬೀದಿ ಬದಿಯ ಹಣ್ಣು ತರಕಾಗಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ ತೆರೆದ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ನಗರಸಭೆ ಪೌರಾಯುಕ್ತ ನವೀನ್ ಚಂದ್ರ ಅವರಿಗೆ ತಾಕೀತು ಮಾಡಿದರು.
ಜಯನಗರದ ಅಂಬೇಡ್ಕರ್ ಉದ್ಯಾನವನದ ಹಿಂಭಾಗದಲ್ಲಿ ಸುಸಜ್ಜಿತವಾದ ವಿದ್ಯುತ್ ಚಿತಾಗಾರ ಗುದ್ದಲಿ ಪೂಜೆಗೆ ತೆರಳಿದ ಶಾಸಕರಿಗೆ ಸ್ಥಳೀಯರು ಕೆಲ ಕಾಲ ಉದ್ಘಾಟನೆಗೆ ಅಡ್ಡಿ ಪಡಿಸಿದರಲ್ಲದೆ ಇಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತದೆ ಅಲ್ಲದೆ ಸ್ಮಶಾನ ಜಾಗ ಚಿಕ್ಕದಾಗಿದ್ದು ವಿದ್ಯುತ್ ಚಿತಾಗಾರ ನಿರ್ಮಾಣದಿಂದ ಸ್ಮಶಾನ ಜಾಗದ ಕೊರತೆ ಉಂಟಾಗುತ್ತದೆ ಎಂದು ತಕರಾರು ಮಾಡಿದರು ಪಕ್ಕದಲ್ಲೇ ಮತ್ತೊಂದು ಸ್ಥಳದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿ ಗುದ್ದಲಿ ಪೂಜೆ ನೆರೆವೇರಿಸಿದರು.
ನಗರದ ಬಸ್ ನಿಲ್ದಾಣ ಸಮೀಪವಿರುದ ಸಂತೇ ಮೈದಾನವನ್ನು ಅಭಿವೃದ್ದಿ ಪಡಿಸಿ ರೈತರಿಗೆ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ದಿನಗಳ ಹಿಂದೆ ಕೊರೆಸಲಾಗಿದ್ದ ಬೋರ್ ವೆಲ್ ಪಂಪು ಮೋಟರ್ ಅಳವಡಿಸಿ ಸಂಪ್ ಗೆ ನೀರು ತುಂಬಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಕೂಡಲೇ ತೆರವುಗೊಳಿಸಲು ಕ್ರಮ ವಹಿಸುವಂತೆ ನಗರಸಭೆ ಪೌರಾಯುಕ್ತ ನವೀನ್ ಚಂದ್ರ ಅವರಿಗೆ ಸೂಚಿಸಿದರು.
ನಗರದ ಒಳಾಂಗಣ ಕ್ರೀಡಾಂಗಣ ಪಕ್ಕದಲ್ಲಿ ಬ್ಯಾಸ್ಕೆಟ್ ಬಾಲ್ ಸಿಂಥೆಟಿಕ್ ಟ್ರ್ಯಾಕ್ಸ್, ಎಸ್.ಎನ್.ಆರ್.ಆಸ್ಪತ್ರೆ ಬಳಿಯ ಕೆ.ಇ.ಬಿ.ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ, ಜಯನಗರದ ಅಂಬೇಡ್ಕರ್ ಪಾರ್ಕ್ ಹಿಂಭಾಗದಲ್ಲಿ ೪ ಕೋಟಿ ಚೆಚ್ಚದಲ್ಲಿ ಸುಸಜ್ಜಿತವಾದ ಹೈಟೆಕ್ ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹಿಂಭಾಗ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಮ್ಮ ಕ್ಲಿನಿಕ್ ಉದ್ಘಾಟನೆ. ನಗರದ ಎಂ.ಜಿ. ರಸ್ತೆಯ ಆಚಾರಿ ಬೀದಿಯಲ್ಲಿ 'ಹೂ, ಹಣ್ಣು ಮತ್ತು ತರಕಾರಿಗರ ೮೦ ಲಕ್ಷದಲ್ಲಿ ತೆರೆದ ಮಾರುಕಟ್ಟೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೈ. ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಪೌರಾಯುಕ್ತ ನವೀನ್ ಚಂದ್ರ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಆಫ್ಸರ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಅಂಚೆ ಅಶ್ವಥ್ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್