
ಚಿತ್ರದುರ್ಗ, 07 ಮಾರ್ಚ್ (ಹಿ.ಸ.):
ಆ್ಯಂಕರ್:ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿದ್ದ ಬಿ. ಆನಂದ್ ಅವರನ್ನು ಕೆಎಸ್ಎಂಸಿಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಶನಿವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.
ನಾಲ್ಕು ವರ್ಷಗಳ ಕಾಲ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ ಆನಂದ್ ಅವರು ಸಣ್ಣ, ಮಧ್ಯಮ ಹಾಗೂ ದೊಡ್ಡ ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಕೊಡುಗೆ ನೀಡಿದ್ದಾರೆ.
ಈ ವೇಳೆ ಜಂಟಿನಿರ್ದೇಶಕರ ಹುದ್ದೆಯ ಪ್ರಭಾರವನ್ನು ಉಪನಿರ್ದೇಶಕ ಮಂಜುನಾಥ್ ಅವರಿಗೆ ವಹಿಸಲಾಯಿತು. ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೈಗಾರಿಕೋದ್ಯಮಿಗಳು ಸಮಾರಂಭದಲ್ಲಿ ಆನಂದ್ ಅವರನ್ನು ಸನ್ಮಾನಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa