
ಕೊಪ್ಪಳ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ ಎಲ್ ಅರಸಿದ್ಧಿ, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ ಅವರು ಏಪ್ರೀಲ್ 14ರ ಬೆಳಗ್ಗೆ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನ ವನಕ್ಕೆ ಆಗಮಿಸಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜದ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್