
ಚಿತ್ರದುರ್ಗ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ತ್ಯಾಗರಾಜ ನಗರದ ಪಿರಮಿಡ್ ಪಾರ್ಕ್ ಹತ್ತಿರ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರ ನಿರೀಕ್ಷಕರ ಕಚೇರಿ, ಚಳ್ಳಕೆರೆ ವೃತ್ತ, ಚಳ್ಳಕೆರೆ ಈ ಕಚೇರಿಯನ್ನು ಸ್ಥಳಾಂತರಿಸಲಾಗಿದೆ.
ಚಳ್ಳಕೆರೆ ನಗರದ ವಾಲ್ಮೀಕಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹತ್ತಿರ, ಗಾಯತ್ರಿ ಕಲ್ಯಾಣ ಮಂಟಪ ರೋಡ್ ಸಮೀಪದ ಕಟ್ಟಡದಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಸ್ಥಳಾಂತರಗೊಂಡಿರುವ ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಅಗತ್ಯ ಸೇವೆ, ಮಾಹಿತಿ ಪಡೆದುಕೊಳ್ಳಬಹುದು ಎಂದು ಚಳ್ಳಕೆರೆ ವೃತ್ತ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa