
ಬೆಂಗಳೂರು, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ದಕ್ಷಿಣ ಭಾರತ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸಿದರು.
ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಉದ್ಘಾಟಿಸಿದರು. ಈ ಪ್ರಶಿಕ್ಷಣ ವರ್ಗದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಕೇಂದ್ರ ಸಚಿವರು ಹಾಗೂ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಸಂಘಟನಾ ಬಲವರ್ಧನೆ, ಕಾರ್ಯಕರ್ತರ ತರಬೇತಿ, ಪಕ್ಷದ ಸಿದ್ಧಾಂತಗಳ ಪ್ರಚಾರ ಹಾಗೂ ಭವಿಷ್ಯದ ಚುನಾವಣಾ ಸಿದ್ಧತೆಯ ಕುರಿತಾಗಿ ಈ ಮಹಾಭಿಯಾನದಲ್ಲಿ ಚರ್ಚೆಗಳು ನಡೆದವು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa