ಮಲ್ಲಿಕಾರ್ಜು ಖರ್ಗೆ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ನವದೆಹಲಿ, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ನಿಯೋಗವು ಭಾರತ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ನಿಯೋಗದಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು, ನಿರ್ಮಲಾ ಸೀತಾರಾಮನ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಸೇರಿ
ಕಿರಣ ರಿಜೀಜು


ನವದೆಹಲಿ, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ನಿಯೋಗವು ಭಾರತ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ನಿಯೋಗದಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು, ನಿರ್ಮಲಾ ಸೀತಾರಾಮನ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ “ಭಯೋತ್ಪಾದಕ” ಎಂಬ ಪದ ಬಳಕೆ ಮಾಡಿರುವ ಹಿನ್ನೆಲೆಯಲ್ಲಿ ಖರ್ಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಿರಣ್ ರಿಜಿಜು, ಕಾಂಗ್ರೆಸ್ ಅಧ್ಯಕ್ಷರು ಪ್ರಧಾನಿಯ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದರು. ಇಂತಹ ಹೇಳಿಕೆಗಳು ಕೇವಲ ರಾಜಕೀಯ ಮಟ್ಟದಲ್ಲಿ ಮಾತ್ರವಲ್ಲದೆ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳಿಗೂ ವಿರುದ್ಧವಾಗಿವೆ ಎಂದು ಅವರು ಹೇಳಿದರು.

ಪ್ರಧಾನಿಯನ್ನು “ಭಯೋತ್ಪಾದಕ” ಎಂದು ಕರೆಯುವುದು ಗಂಭೀರ ವಿಷಯವಾಗಿದ್ದು, ಈ ರೀತಿಯ ಭಾಷೆಯನ್ನು ಯಾವುದೇ ರಾಜಕೀಯ ಪಕ್ಷವು ಹಿಂದೆ ಬಳಸಿಲ್ಲ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ನಿಯೋಗದ ಮನವಿಯನ್ನು ಆಲಿಸಿದ ಚುನಾವಣಾ ಆಯೋಗವು ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. ಈ ಕುರಿತು ಮಂಗಳವಾರವೇ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande