
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಎರಡನೇ ಸುತ್ತಿನ ಪ್ರಚಾರಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಚಖಂಡಿ ಗ್ರಾಮಕ್ಕೆ ಭೇಟಿ ನೀಡಿ ವೀರಭದ್ರೇಶ್ವರ ಹಾಗೂ ದುರ್ಗಾದೇವಿ ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸಚಿವರಾದ ಹೆಚ್ ಕೆ ಪಾಟೀಲ್, ಆರ್ ಬಿ ತಿಮ್ಮಾಪುರ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ದೇವರ ಆಶೀರ್ವಾದ ಪಡೆದುಕೊಂಡ ಬಳಿಕ ಸಿಎಂ ಮುಂದಿನ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande