ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ನೊಂದಾಯಿತ ಬೌದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಮ್ಮಾಚಾರಿಗಳು ಮತ್ತು ಸಹಾಯಕ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಜಿ ನಮೂನೆಯನ
ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ


ಶಿವಮೊಗ್ಗ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ನೊಂದಾಯಿತ ಬೌದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಮ್ಮಾಚಾರಿಗಳು ಮತ್ತು ಸಹಾಯಕ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬೌದ್ದ ವಿಹಾರ ನೊಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಧಮ್ಮಾಚಾರಿಗಳ ಭಾವಚಿತ್ರ, ನಿವಾಸ ದೃಢೀಕರಣ, ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ಪ್ರತಿ, ಸೇವಾ ದೃಢಿಕರಣ ಪತ್ರ ಹಾಗೂ ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆಗಳೊಂದಿಗೆ ಏ.09 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-220206, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು..

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande