
ನವದೆಹಲಿ, 08 ಏಪ್ರಿಲ್ (ಹಿ.ಸ.):
ಆ್ಯಂಕರ್:
ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ದೆಹಲಿ ಜಂತರ್ ಮಂತರ್ನಲ್ಲಿ ಭಾರಿ ಪ್ರತಿಭಟನೆ ನಡೆಸಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವ ಶರ್ಮಾ ಅವರು ಬಳಸಿದ ಆಕ್ಷೇಪಾರ್ಹ ಭಾಷೆಯನ್ನು ಖಂಡಿಸಿದರು. ಇದೇ ವೇಳೆ ಪಕ್ಷದ ನಾಯಕ ಪವನ್ ಖೇರಾ ವಿರುದ್ಧ ಕೈಗೊಂಡ ಪೊಲೀಸ್ ಕ್ರಮವನ್ನೂ ತೀವ್ರವಾಗಿ ವಿರೋಧಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದರು. ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು “ಬಿಜೆಪಿ ದಲಿತ ವಿರೋಧಿ” ಎಂದು ಘೋಷಣೆ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉದಯ್ ಭಾನು ಚಿಬ್, “ನಾವು ಯಾವುದೇ ಒತ್ತಡಕ್ಕೂ ಜಗ್ಗುವುದಿಲ್ಲ, ಧೈರ್ಯ ಕಳೆದುಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಅವರು ಹಿಮಂತಾ ಬಿಸ್ವ ಶರ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಪುನರುಚ್ಚರಿಸಿ, ಆ ಆರೋಪಗಳನ್ನು ಬಹಿರಂಗಪಡಿಸಿದ ಕಾರಣಕ್ಕೆ ಪವನ್ ಖೇರಾ ಅವರನ್ನು ಗುರಿಯಾಗಿಸಲಾಗಿದೆ ಎಂದು ದೂರಿದರು.
ಇದಕ್ಕೆ ಮುನ್ನ ಏಪ್ರಿಲ್ 5ರಂದು ಪವನ್ ಖೇರಾ, ಮುಖ್ಯಮಂತ್ರಿ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ಆಸ್ತಿ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಬಳಿಕ ಅಸ್ಸಾಂ ಪೊಲೀಸ್ ಖೇರಾ ನಿವಾಸದ ಮೇಲೆ ದಾಳಿ ನಡೆಸಿತ್ತು. ಆದರೆ ಅವರು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa