ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ವಿಶೇಷ ಚೇತನರಿಂದ ಅರ್ಜಿ ಆಹ್ವಾನ
ಬಳ್ಳಾರಿ, 01 ಮೇ (ಹಿ.ಸ.) : ಆ್ಯಂಕರ್ : ವಿಶೇಷ ಚೇತನರಿಗೆ ಡಿಪ್ಲೋಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ 2026-27 ನೇ ಸಾಲಿನ ಮೂರು ವರ್ಷದ ಡಿಪ್ಲೋಮಾ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ
ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ವಿಶೇಷ ಚೇತನರಿಂದ ಅರ್ಜಿ ಆಹ್ವಾನ


ಬಳ್ಳಾರಿ, 01 ಮೇ (ಹಿ.ಸ.) :

ಆ್ಯಂಕರ್ : ವಿಶೇಷ ಚೇತನರಿಗೆ ಡಿಪ್ಲೋಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ 2026-27 ನೇ ಸಾಲಿನ ಮೂರು ವರ್ಷದ ಡಿಪ್ಲೋಮಾ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕೋರ್ಸ್ ಗಳು:

ಅನುದಾನಿತ ಕೋರ್ಸ್: ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್.

ಅನುದಾನಿತ ರಹಿತ ಕೋರ್ಸ್: ಜ್ಯೂಯಲರಿ ಡಿಸೈನ್ಸ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ.

ಅರ್ಹತೆ:

10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತೀರ್ಣರಾದ ಹಾಗೂ ವಿವಿಧ ಅಂಗವೈಕಲ್ಯತೆ ಲಕ್ಷಣ ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೂಳೆ ಮತ್ತು ಕೀಲು ಅಂಗವಿಕಲತೆಯಲ್ಲಿ ಶೇ.40, ಕಿವುಡ ಮತ್ತು ಮೂಗು ಅಂಗವಿಕಲತೆ ಶೇ.60, ಅಂಧತ್ವ-6/60 ಅಥವಾ 20/200 ಸ್ನೆಲೆನ್(ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಕೋರ್ಸ್ ಗೆ ಮೇಲ್ಪಟ್ಟು ಇರಬೇಕು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ ಹಾಗೂ ಪಾಲಿಟೆಕ್ನಿಕ್ ಉತ್ತಮ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವ್ಯಸ್ಥೆ ಕಲ್ಪಿಸಲಾಗಿದೆ.

ಪ್ರವೇಶಾತಿಗಾಗಿ ಅರ್ಜಿಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 200 ರೂ. ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1 ಇವರಿಗೆ 100 ರೂ. ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು 570-006 ಇಲ್ಲಿಗೆ ಜೂ.05 ರೊಳಗಾಗಿ ಕಳುಹಿಸಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.jsspda.org ಗೆ ಭೇಟಿ ನೀಡಿ ಅರ್ಜಿ ಅಥವಾ ಇನ್ನಿತರೆ ಮಾಹಿತಿಗಾಗಿ ಮೊ.9844644937 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande