ಇಂಡಿ ಒಕ್ಕೂಟಕ್ಕೆ ಪ್ರಜಾಪಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬೊಮ್ಮಾಯಿ
ಹಾವೇರಿ, 07 ಮೇ (ಹಿ.ಸ.): ಆ್ಯಂಕರ್: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವು
ಇಂಡಿ ಒಕ್ಕೂಟಕ್ಕೆ ಪ್ರಜಾಪಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬೊಮ್ಮಾಯಿ


ಹಾವೇರಿ, 07 ಮೇ (ಹಿ.ಸ.):

ಆ್ಯಂಕರ್:

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರತಿಯೊಂದರಲ್ಲೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ. ಅವರು ಸಂವಿಧಾನದ ಪ್ರಕಾರ ಮಹಿಳೆಯರು, ಬಡವರು, ಸಾಮಾನ್ಯ ಜನರನ್ನು ರಕ್ಷಣೆ ಮಾಡಿಲ್ಲ. ಈಗ ಟಿಎಂಸಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೂ, ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಭಂಡತನ ತೋರುತ್ತಿದ್ದು, ಅವರು ಪಜಾಪಭತ್ತದಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ಅವರು ಯಾವಾಗಲೂ ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಅದು ಈಗ ಬಹಿರಂಗಗೊಂಡಿದೆ. ಆದ್ದರಿಂದ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande