
ಬಳ್ಳಾರಿ, 13 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಆಸಕ್ತರು ಆನ್ ಲೈನ್ ವೆಬ್ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಬೇಕಾದ ದಾಖಲೆಗಳು :
ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ವಸತಿ ರಹಿತರಾಗಿದ್ದಲ್ಲಿ ನಿವೇಶನಕ್ಕೆ ಸಂಬ0ಧಿಸಿದ ದಾಖಲೆಗಳು(ಹಕ್ಕುಪತ್ರ, ಕ್ರಯಪತ್ರ, ದಾನಪತ್ರ, ಉಡುಗೊರೆ, ಖಾತಾ), ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಪಾನ್ ಕಾರ್ಡ್(ಲಭ್ಯವಿದ್ದಲ್ಲಿ), ನಿಗಧಿತ ನಮೂನೆ (ಅನೆಕ್ಷರ್-2ಎ, 2ಬಿ, 2ಸಿ) ಯಲ್ಲಿ ಸೆಲ್ಪ್ ಅಂಡರ್ಟೆಕಿAಗ್ ಹೊಂದಿರಬೇಕು. ಈ ಮೇಲಿನ ದಾಖಲೆಗಳ ಜೊತೆಗೆ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನೂ ಸಲ್ಲಿಸಬೇಕು.
ಈ ಹಿಂದೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಕಡ್ಡಾಯವಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-2 ರ ಆಶ್ರಯ ಶಾಖೆಗೆ ಜೂ.30 ರೊಳಗಾಗಿ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸಲು ಸಾಮಾನ್ಯ ಸೇವಾ ಕೇಂದ್ರ ಸೆಂಟರ್ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಗಡಗಿ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಹತ್ತಿರದ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಅಥವಾ ದೂ.08392-273479/278168 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್