
ಮುಂಬಯಿ, 24 ಜೂನ್ (ಹಿ.ಸ.) :
ಆ್ಯಂಕರ್ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳಲ್ಲಿ ಜಲಾವೃತ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ಮುಂಬೈ ಮತ್ತು ಪಾಲ್ಘರ್ ಜಿಲ್ಲೆಗಳಿಗೆ ರೆಡ್ ಅಲರ್ಟ್, ಠಾಣೆ, ರಾಯಗಢ ಹಾಗೂ ಸಿಂಧುದುರ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 208 ಮಿ.ಮೀ. ಮಳೆ ದಾಖಲಾಗಿದ್ದು, ಸಯಾನ್, ದಾದರ್, ಕಿಂಗ್ಸ್ ಸರ್ಕಲ್, ಅಂಧೇರಿ ಹಾಗೂ ಸಾಂತಾಕ್ರೂಜ್ ಸೇರಿದಂತೆ ಹಲವು ಪ್ರದೇಶಗಳು ನೀರಿನಿಂದ ಮುಳುಗಿವೆ. ಭಾರೀ ಮಳೆಯಿಂದ ಸ್ಥಳೀಯ ರೈಲು, ಮೆಟ್ರೋ ಹಾಗೂ ಬಸ್ ಸಂಚಾರಕ್ಕೂ ತಾತ್ಕಾಲಿಕ ಅಡಚಣೆ ಉಂಟಾಯಿತು.
ವಸಾಯಿ–ವಿರಾರ್ ಮತ್ತು ನಾಲಾಸೋಪಾರಾ ಪ್ರದೇಶಗಳ ತಗ್ಗು ಪ್ರದೇಶಗಳಲ್ಲಿಯೂ ನೀರು ನಿಂತಿದ್ದು, ಮಳೆ ಮುಂದುವರಿದರೆ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಕೆಲವು ಕಡೆ ಮರಗಳು ಉರುಳಿದ್ದು, ವಿಕ್ರೋಲಿಯಲ್ಲಿ ಮನೆಯ ಗೋಡೆ ಕುಸಿದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹವಾಮಾನ ಇಲಾಖೆ ಮುಂದಿನ ಕೆಲ ಗಂಟೆಗಳ ಕಾಲ ಭಾರೀ ಮಳೆ ಹಾಗೂ ಗಂಟೆಗೆ 80 ಕಿ.ಮೀ. ವೇಗದ ಗಾಳಿಯ ಎಚ್ಚರಿಕೆ ನೀಡಿದ್ದು, ಆಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.