
ನವದೆಹಲಿ, 28 ಜೂನ್ (ಹಿ.ಸ.) :
ಆ್ಯಂಕರ್ : ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಭಾನುವಾರ ದೆಹಲಿಯ ರಾಜ್ಘಾಟ್ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಈ ಮಾಹಿತಿಯನ್ನು 'ಕಾಕ್ರೋಚ್ ಜನತಾ ಪಾರ್ಟಿ' ಸಾಮಾಜಿಕ ಜಾಲತಾಣ ಅಭಿಯಾನದ ಮುಖ್ಯಸ್ಥ ಅಭಿಜೀತ್ ದೀಪಕೆ ಅವರು ಎಕ್ಸ್ ಮೂಲಕ ಹಂಚಿಕೊಂಡಿದ್ದಾರೆ.
ಸೋನಂ ವಾಂಗ್ಚುಕ್ ಅವರು, ಆರೋಪಿತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರಕರಣದ ಕುರಿತು ಸರ್ಕಾರದಿಂದ ಸ್ಪಷ್ಟ ಉತ್ತರದ ಬೇಡಿಕೆ ಮುಂದಿಟ್ಟಿದ್ದಾರೆ. ಈ ಉಪವಾಸ ಸತ್ಯಾಗ್ರಹವು ಸಿಜೆಪಿ ವತಿಯಿಂದ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿದೆ.
ಇದಕ್ಕೂ ಮುನ್ನ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ, ಸರ್ಕಾರದ ಪ್ರತಿಕ್ರಿಯೆಗಾಗಿ ಜೂನ್ 27ರವರೆಗೆ ಕಾಯುವುದಾಗಿ ಸೋನಂ ವಾಂಗ್ಚುಕ್ ತಿಳಿಸಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಅಥವಾ ಲಡಾಖ್ನ ಪರಿಸರ ಹಾಗೂ ಸಾಂಸ್ಕೃತಿಕ ಪರಂಪರೆ ಸಂರಕ್ಷಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸುವುದಾಗಿ ಅವರು ಘೋಷಿಸಿದ್ದರು.
ಇದೇ ವೇಳೆ, ಸಿಜೆಪಿ ದೇಶದ ಯುವಜನರು ಹಾಗೂ ನಾಗರಿಕರು ಜಂತರ್ ಮಂತರ್ಗೆ ಆಗಮಿಸಿ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ಕರೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.