ಮಲೇಷ್ಯಾ ಪ್ರಧಾನಿಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಸಂಭಾಷಣೆ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಲೇಷ್ಯಾ ಪ್ರಧಾನಿಯೊಂದಿಗೆ ಆತ್ಮೀಯ ಮತ್ತು ಸೌಹಾರ್ದಯುತ ದೂರವಾಣಿ ಸಂಭಾಷಣೆ ನಡೆಸಿದ್ದು, ಉಭಯ ಪ್ರದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಸಂಭಾಷಣೆ ವೇಳೆ ಮಲೇಷ್ಯಾ ಪ್ರಧಾನಿ
telephone conversation


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಲೇಷ್ಯಾ ಪ್ರಧಾನಿಯೊಂದಿಗೆ ಆತ್ಮೀಯ ಮತ್ತು ಸೌಹಾರ್ದಯುತ ದೂರವಾಣಿ ಸಂಭಾಷಣೆ ನಡೆಸಿದ್ದು, ಉಭಯ ಪ್ರದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಸಂಭಾಷಣೆ ವೇಳೆ ಮಲೇಷ್ಯಾ ಪ್ರಧಾನಿ ಮುಖ್ಯಮಂತ್ರಿಗಳಿಗೆ ಶುಭಾಶಯಗಳನ್ನು ತಿಳಿಸಿ, ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಲೇಷ್ಯಾಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯ ಆಹ್ವಾನಕ್ಕೆ ಕೃತಜ್ಞತೆ ಸಲ್ಲಿಸಿ, ಪರಸ್ಪರ ಅನುಕೂಲಕರ ಸಮಯದಲ್ಲಿ ಮಲೇಷ್ಯಾಕ್ಕೆ ಭೇಟಿ ನೀಡುವ ಆಶಯವನ್ನು ವ್ಯಕ್ತಪಡಿಸಿದರು.

ಇದೇ ವೇಳೆ, ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದ ನಾವೀನ್ಯತೆ, ಕೈಗಾರಿಕೆ, ತಂತ್ರಜ್ಞಾನ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಅಪಾರ ಸಾಮರ್ಥ್ಯವನ್ನು ನೇರವಾಗಿ ಅನುಭವಿಸುವಂತೆ ಮಲೇಷ್ಯಾ ಪ್ರಧಾನಿಯವರನ್ನು ಆಹ್ವಾನಿಸಿದರು.

ಮಲೇಷ್ಯಾ ಮತ್ತು ಕರ್ನಾಟಕ ನಡುವಿನ ಸಹಯೋಗವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಶಿಕ್ಷಣ, ಪ್ರತಿಭಾ ವಿನಿಮಯ ಹಾಗೂ ಸಾಂಸ್ಕೃತಿಕ ಸಹಕಾರದ ಕ್ಷೇತ್ರಗಳಲ್ಲಿ ಬಲವಾದ ಪಾಲುದಾರಿಕೆಯನ್ನು ರೂಪಿಸುವ ಅಗತ್ಯವನ್ನು ಮುಖ್ಯಮಂತ್ರಿ ಒತ್ತಿ ಹೇಳಿದರು.

ಕರ್ನಾಟಕದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮಲೇಷಿಯಾದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿರುವುದು ಉಭಯ ಪ್ರದೇಶಗಳ ನಡುವಿನ ಜನರಿಂದ-ಜನರಿಗೆ ಇರುವ ಬಲವಾದ ಬಾಂಧವ್ಯದ ಪ್ರತೀಕವಾಗಿದೆ ಎಂದು ಅವರು ಹೇಳಿದರು.

ಈ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು ಭವಿಷ್ಯದಲ್ಲಿ ಇನ್ನಷ್ಟು ಹಂಚಿಕೆಯ ಬೆಳವಣಿಗೆ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಭದ್ರ ಅಡಿಪಾಯವಾಗಲಿವೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.

ಉಭಯ ನಾಯಕರು ಮುಂದಿನ ದಿನಗಳಲ್ಲಿ ಪರಸ್ಪರ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸಿ, ಆರ್ಥಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳನ್ನು ಅನ್ವೇಷಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande