ಸೈಪ್ರಸ್ ಧ್ವಜದ ಸರಕು ಹಡಗಿನ ಮೇಲೆ ಇರಾನ್ ದಾಳಿ ಖಂಡಿಸಿದ ಭಾರತ
ನವದೆಹಲಿ, 12 ಜುಲೈ (ಹಿ.ಸ.): ಆ್ಯಂಕರ್: ಒಮಾನ್ ಕರಾವಳಿ ಸಮೀಪ ಸೈಪ್ರಸ್ ಧ್ವಜದಡಿ ಸಂಚರಿಸುತ್ತಿದ್ದ ಜಿಎಫ್‌ಎಸ್ ಗ್ಯಾಲಕ್ಸಿ ವಾಣಿಜ್ಯ ಸರಕು ಹಡಗಿನ ಮೇಲೆ ನಡೆದ ಇರಾನ್ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಾಣಿಜ್ಯ ಹಡಗುಗಳ ಮೇಲೆ ಮರುಮರು ನಡೆಯುತ್ತಿರುವ ದಾಳಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ
MEA Statement


ನವದೆಹಲಿ, 12 ಜುಲೈ (ಹಿ.ಸ.):

ಆ್ಯಂಕರ್:

ಒಮಾನ್ ಕರಾವಳಿ ಸಮೀಪ ಸೈಪ್ರಸ್ ಧ್ವಜದಡಿ ಸಂಚರಿಸುತ್ತಿದ್ದ ಜಿಎಫ್‌ಎಸ್ ಗ್ಯಾಲಕ್ಸಿ ವಾಣಿಜ್ಯ ಸರಕು ಹಡಗಿನ ಮೇಲೆ ನಡೆದ ಇರಾನ್ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಾಣಿಜ್ಯ ಹಡಗುಗಳ ಮೇಲೆ ಮರುಮರು ನಡೆಯುತ್ತಿರುವ ದಾಳಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಭಾರತ, ಉದ್ವಿಗ್ನತೆಯನ್ನು ತಕ್ಷಣ ಕಡಿಮೆ ಮಾಡಿ ರಾಜತಾಂತ್ರಿಕ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಕರೆ ನೀಡಿದೆ.

ಹಡಗಿನಲ್ಲಿ 11 ಭಾರತೀಯರು ಇದ್ದು, ಅವರಲ್ಲಿ 10 ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬ ಭಾರತೀಯ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ವಿದೇಶಾಂಗ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯ ಮೇಲೆ ನಿಕಟ ನಿಗಾ ವಹಿಸಿದ್ದು, ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದು ತಿಳಿಸಿದೆ. ಸಹಕಾರ ನೀಡಿದ ಒಮಾನ್ ಸರ್ಕಾರಕ್ಕೆ ಭಾರತ ಕೃತಜ್ಞತೆ ಸಲ್ಲಿಸಿದೆ.

ಪ್ರದೇಶದಲ್ಲಿ ವಾಣಿಜ್ಯ ಹಡಗುಗಳು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳನ್ನು ತಕ್ಷಣ ನಿಲ್ಲಿಸಬೇಕು. ಅಂತಾರಾಷ್ಟ್ರೀಯ ಕಾನೂನಿನಂತೆ ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಸುರಕ್ಷಿತ ಹಾಗೂ ನಿರ್ಬಂಧರಹಿತ ನೌಕಾಯಾನ ಮತ್ತು ವ್ಯಾಪಾರವನ್ನು ಶೀಘ್ರವೇ ಪುನಃಸ್ಥಾಪಿಸಬೇಕು ಎಂದು ಭಾರತ ಒತ್ತಾಯಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande