
ನವದೆಹಲಿ, 27 ಜುಲೈ (ಹಿ.ಸ.):
ಆ್ಯಂಕರ್:
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸ್ಥಾಪನಾ ದಿನದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಿಆರ್ಪಿಎಫ್ ಯೋಧರು ಹಾಗೂ ಅವರ ಕುಟುಂಬಗಳಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಸಿಆರ್ಪಿಎಫ್ ಅಚಲ ಧೈರ್ಯ, ಅತ್ಯುನ್ನತ ವೃತ್ತಿಪರತೆ ಮತ್ತು ನಿಸ್ವಾರ್ಥ ಸೇವೆಯ ಪ್ರತೀಕವಾಗಿದ್ದು, ಭಾರತದ ಆಂತರಿಕ ಭದ್ರತೆಯ ಅತ್ಯಂತ ಬಲಿಷ್ಠ ಸ್ತಂಭಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.
ದೇಶದ ಏಕತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಸಿಆರ್ಪಿಎಫ್ ಸಿಬ್ಬಂದಿಯ ಅಪ್ರತಿಮ ಸಮರ್ಪಣೆ, ತ್ಯಾಗ ಮತ್ತು ಕರ್ತವ್ಯನಿಷ್ಠೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶದ ಸೇವೆಯಲ್ಲಿ ನಿರಂತರವಾಗಿ ತೊಡಗಿರುವ ಸಿಆರ್ಪಿಎಫ್ ಸಿಬ್ಬಂದಿಯ ಸೇವೆಗೆ ಇಡೀ ರಾಷ್ಟ್ರ ಗೌರವ ಸಲ್ಲಿಸುತ್ತದೆ ಎಂದು ರಾಜನಾಥ್ ಸಿಂಗ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.