
ಶಿವಮೊಗ್ಗ, 29 ಜುಲೈ (ಹಿ.ಸ.):
ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜು. 31 ರಿಂದ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಕ್ರೀಡಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಜಿಯನ್ನು https://sevasindhu.karnataka.gov.in ಪೋರ್ಟಲ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು
ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.