ಮದರ್ ತೆರೇಸಾ ಜನ್ಮದಿನ: ಸಿಎಂ ಡಿ.ಕೆ. ಶಿವಕುಮಾರ್ ನಮನ
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಭಾರತ ರತ್ನ ಮದರ್ ತೆರೇಸಾ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮದರ್ ತೆರೇಸಾ ಅವರು ಕರುಣ
CM X post


ಬೆಂಗಳೂರು, 26 ಆಗಸ್ಟ್ (ಹಿ.ಸ.):

ಆ್ಯಂಕರ್:

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಭಾರತ ರತ್ನ ಮದರ್ ತೆರೇಸಾ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮದರ್ ತೆರೇಸಾ ಅವರು ಕರುಣೆ ಮತ್ತು ಮಾನವೀಯತೆಯ ಶಾಶ್ವತ ಪ್ರತೀಕವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

“ದುರ್ಬಲರು ಹಾಗೂ ಸಂಕಷ್ಟದಲ್ಲಿರುವವರಿಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಅವರು, ಪ್ರತಿಯೊಬ್ಬ ಮನುಷ್ಯನ ಘನತೆ ಮತ್ತು ಮೌಲ್ಯದ ಮೇಲಿನ ಆಳವಾದ ನಂಬಿಕೆಯನ್ನು ತಮ್ಮ ಸೇವೆಯ ಮೂಲಕ ಪ್ರತಿಬಿಂಬಿಸಿದರು. ಅವರ ಜೀವನವು ದಯೆ ಮತ್ತು ವಿನಯದಿಂದ ಸೇವೆ ಸಲ್ಲಿಸಲು ಇಂದಿಗೂ ನಮಗೆ ಪ್ರೇರಣೆ ನೀಡುತ್ತದೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande