ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ಚಂದ್ಗೆ ದೇಶದ ಗಣ್ಯರಿಂದ ನಮನ
ನವದೆಹಲಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದು, ಹಾಕಿ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಅವರ ಜಯಂತಿಯಂದು ಅವರಿಗೆ ಗೌ
प्रतीकात्मक


ನವದೆಹಲಿ, 29 ಆಗಸ್ಟ್ (ಹಿ.ಸ.):

ಆ್ಯಂಕರ್:ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದು, ಹಾಕಿ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ, ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಜರ್ ಧ್ಯಾನ್‌ಚಂದ್ ಅವರ ಪರಂಪರೆ ದೇಶದಲ್ಲಿ ಸಂಕಲ್ಪ, ಶಿಸ್ತು ಹಾಗೂ ಶ್ರೇಷ್ಠತೆಯ ಮನೋಭಾವ ಬೆಳೆಸುತ್ತಿದೆ ಎಂದು ಹೇಳಿದರು. ದೇಶದ ಕ್ರೀಡಾ ವ್ಯವಸ್ಥೆ ವೇಗವಾಗಿ ಬಲಗೊಳ್ಳುತ್ತಿದ್ದು, ಭಾರತೀಯ ಕ್ರೀಡಾಪಟುಗಳು ಜಾಗತಿಕ ವೇದಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು. ಜನರು ದೈಹಿಕ ಕ್ಷಮತೆ ಬೆಳೆಸಿಕೊಳ್ಳುವುದರ ಜೊತೆಗೆ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಓಂ ಬಿರ್ಲಾ ಅವರು, ಮೇಜರ್ ಧ್ಯಾನ್‌ಚಂದ್ ಅವರ ಪ್ರತಿಭೆ, ಶಿಸ್ತು ಮತ್ತು ಸಮರ್ಪಣಾ ಮನೋಭಾವ ಭಾರತೀಯ ಹಾಕಿಗೆ ವಿಶ್ವಮಟ್ಟದಲ್ಲಿ ಹೆಮ್ಮೆಯ ಸ್ಥಾನ ತಂದುಕೊಟ್ಟಿದೆ ಎಂದು ಹೇಳಿದರು. ‘ಹಾಕಿಯ ಮಾಂತ್ರಿಕ’ನ ಪರಂಪರೆ ಕೋಟ್ಯಂತರ ಯುವಜನರಿಗೆ ಇಂದಿಗೂ ಸ್ಫೂರ್ತಿಯಾಗಿದೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧ್ಯಾನ್‌ಚಂದ್ ಅವರ ಅಸಾಧಾರಣ ಪ್ರತಿಭೆ ಭಾರತೀಯ ಹಾಕಿಯನ್ನು ವಿಶ್ವದ ಎತ್ತರಕ್ಕೆ ಕೊಂಡೊಯ್ದಿತು ಎಂದು ಸ್ಮರಿಸಿದರು. ಅವರ ಶಿಸ್ತು, ಪರಿಶ್ರಮ ಮತ್ತು ರಾಷ್ಟ್ರ ಸಮರ್ಪಣೆ ಭಾರತೀಯ ಕ್ರೀಡಾ ಕ್ಷೇತ್ರದ ಅಮೂಲ್ಯ ಪರಂಪರೆ ಎಂದು ಬಣ್ಣಿಸಿದರು.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಹಾಗೂ ಜೆ.ಪಿ. ನಡ್ಡಾ ಅವರು ಕೂಡ ಮೇಜರ್ ಧ್ಯಾನ್‌ಚಂದ್ ಅವರಿಗೆ ಗೌರವ ಸಲ್ಲಿಸಿದರು. ಅವರ ಕೌಶಲ್ಯ, ದೇಶಪ್ರೇಮ, ಶಿಸ್ತು ಮತ್ತು ಕ್ರೀಡೆಯ ಮೇಲಿನ ಸಮರ್ಪಣೆ ಹಲವು ತಲೆಮಾರುಗಳ ಭಾರತೀಯರಿಗೆ ಸ್ಫೂರ್ತಿಯಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯುವ ಕ್ರೀಡಾ ಪ್ರತಿಭೆಗಳನ್ನು ಬೆಳೆಸಲು ಹಾಗೂ ಕ್ರೀಡಾಪಟುಗಳನ್ನು ಸಬಲಗೊಳಿಸಲು ಬಲಿಷ್ಠ ಕ್ರೀಡಾ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande