
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಸಚಿವ ಬಸವರಾಜ ರಾಯರೆಡ್ಡಿ ಅವರ ಕೆಲವು ಹೇಳಿಕೆಗಳು ಹಾಗೂ ನಿಲುವುಗಳು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂತಾಗಿವೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.
ಸರ್ಕಾರದ ನೀತಿ, ಆಡಳಿತಾತ್ಮಕ ವಿಚಾರಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಗಮನ ಸೆಳೆದಿದೆ.
ಇತ್ತೀಚೆಗೆ ಅಧಿಕಾರಿಗಳ ಕಾರ್ಯವೈಖರಿ ಕುರಿತು ಖಡಕ್ ಎಚ್ಚರಿಕೆ ನೀಡಿದ್ದ ರಾಯರೆಡ್ಡಿ, ತಮ್ಮ ಮಾತು ಕೇಳದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.
ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದ್ದರು.
ರಾಯರೆಡ್ಡಿ ಅವರ ಇಂತಹ ಬಹಿರಂಗ ಹೇಳಿಕೆಗಳು ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆಗೆ ಕಾರಣವಾಗುತ್ತಿದ್ದು, ಅವರ ನಿಲುವು ಸರ್ಕಾರಕ್ಕೆ ‘ಬಿಸಿತುಪ್ಪ’ದಂತಾಗಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ.
ರಾಯರೆಡ್ಡಿ ಹೇಳಿಕೆ: “ನನ್ನ ಮಾತು ಕೇಳದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡುತ್ತೇನೆ” ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R