
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಸೆಪ್ಟೆಂಬರ್ 17ರಂದು ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಟಿ. ರಘುಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಅಧಿಕೃತ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು 7 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್