ರಾಹುಲ್ ಗಾಂಧಿ ವಿರುದ್ಧ ಸಿ.ಟಿ. ರವಿ ವಾಗ್ದಾಳಿ: ಭಾರತ್ ಜೋಡೋ ಬದಲು ಭಾರತ್ ತೋಡೋ ಮನಸ್ಸಿನಲ್ಲಿರಬಹುದು
ಭಾರತ್ ಜೋಡೋ’ ಬದಲು ‘ಭಾರತ್ ತೋಡೋ’ ಮನಸ್ಸಿನಲ್ಲಿರಬಹುದು
ct-ravi-slams-hariprasad-over-rahul-gandhi-bharat-jodo-remark


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ’ ಅಭಿಯಾನದ ಕುರಿತು ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಹುಲ್ ಗಾಂಧಿ ಅವರ ಮನಸ್ಸಿನಲ್ಲಿ ‘ಭಾರತ್ ಜೋಡೋ’ ಬದಲಿಗೆ ‘ಭಾರತ್ ತೋಡೋ’ ಇರಬಹುದು ಎಂದು ಹೇಳಿದ್ದಾರೆ.

ಹರಿಪ್ರಸಾದ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿರುವ ಸಿ.ಟಿ. ರವಿ, ಕಾಂಗ್ರೆಸ್ ನಾಯಕರು ದೇಶದ ವಿಚಾರದಲ್ಲಿ ಯಾವ ರೀತಿಯ ರಾಜಕೀಯ ಮಾಡುತ್ತಿದ್ದಾರೆ ಎಂಬುದನ್ನು ಪ್ರಶ್ನಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande