
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಕರ್ನಾಟಕದಾದ್ಯಂತ ಉದ್ಯಾನವನಗಳ ಶೇ. 5ರಷ್ಟು ಭೂಮಿಯನ್ನು ಬೇರ್ಪಡಿಸುವ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಅಧಿಕೃತವಾಗಿ ಹಿಂಪಡೆಯಬೇಕು ಎಂದು ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ವಾಕರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.
ಮಸೂದೆ ವಿರುದ್ಧ ಸಂಘದ ಅಧ್ಯಕ್ಷ ಡಾ. ಎಸ್. ಉಮೇಶ್ ಕುಮಾರ್ ಅವರ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗಿತ್ತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಸೂದೆಯನ್ನು ಅಧಿಕೃತವಾಗಿ ಹಿಂಪಡೆಯುವುದಾಗಿ ಸ್ಪಷ್ಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸಂಘವು ತನ್ನ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದೆ.
ಮುಖ್ಯಮಂತ್ರಿಗಳ ಭರವಸೆಗೆ ಧನ್ಯವಾದ ಸಲ್ಲಿಸಿರುವ ಸಂಘ, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮಸೂದೆ ಹಿಂಪಡೆಯುವ ಪ್ರಸ್ತಾವವನ್ನು ಔಪಚಾರಿಕವಾಗಿ ಮಂಡಿಸಿ ಅಂಗೀಕರಿಸುವ ಮೂಲಕ ಸರ್ಕಾರ ತನ್ನ ಬದ್ಧತೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದೆ.
ಕರ್ನಾಟಕದ ಹಸಿರು ಹೊದಿಕೆ ಹಾಗೂ ಸಾರ್ವಜನಿಕ ಉದ್ಯಾನವನಗಳ ಸಂರಕ್ಷಣೆ ರಾಜಿಯಾಗದ ವಿಷಯವಾಗಿದೆ ಎಂದು ಸಂಘ ತಿಳಿಸಿದೆ. ಒಂದು ವೇಳೆ ಮುಂಬರುವ ಅಧಿವೇಶನದಲ್ಲಿ ಮಸೂದೆಯನ್ನು ಹಿಂಪಡೆಯಲು ಸರ್ಕಾರ ವಿಫಲವಾದರೆ, ರಾಜ್ಯಾದ್ಯಂತ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಬೇಕಾಗುತ್ತದೆ ಎಂದು ಅಧ್ಯಕ್ಷ ಡಾ. ಎಸ್. ಉಮೇಶ್ ಕುಮಾರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.